ಪ್ರಾಪ್ತೆಯ ಅಂತ್ಯೋಕ್ತಿ
ಎದೆಯೂಳು ಬೆಂಕಿಯ ಕಡಲು;
ಉರಿಯೊಳು ಬೆಂದಿದೆ ಒಡಲು.
ಬಾಳುವ ಬಯಕೆ ಇನ್ನೆಲ್ಲಿ?
ಹರೆಯದ ಕನಸು ಹರಿದಿರಲು;
ದುರುಳರು ದುಃಸ್ವಪ್ನ ರಾಚಿರಲು
ಕಾಣಲೇನುಳಿದಿಲ್ಲ ಜೀವನದಲ್ಲಿ.
ವಾಂಛೆಗಳಿಗೆ ಮನ ಜಾರಿತ್ತು.
ನಂಬಿಕೆಯೇ ಮೋಸಗೈದಿತ್ತು.
ಮಾಸದ ಗಾಯ ಹೃದಯದಲ್ಲಿ.
ಇದೋ ವಿದಾಯ ಪರ್ವತವೇ,
ಧನ್ಯವಾದಗಳು ಪವನವೇ,
ಹರಸಿ; ಪ್ರಾಪ್ತೆಯ ಅಂತ್ಯದಲ್ಲಿ.
ಬಾಡಿ ಬರಡಾಗಿಹೆನು ನಾನು.
ಮಲಗಲು ಬರುತಿರುವೆನು
ಚಿರನಿದ್ರೆಗೆ ನಿನ್ನ ಭೂಮಡಿಲಲ್ಲಿ.
ಎದೆಗಪ್ಪಿಕೊಂಡು ಸಂತೈಸು;
ಮುಕುತಿಯನ್ನು ಕರುಣಿಸು.
ಹುದುಗಿಸೆನ್ನನು ನಿನ್ನೆದೆಯಲ್ಲಿ.
..... ...... .....✍ತ್ರಿನೇತ್ರಜ.
ಶಿವಕುಮಾರ.ಹಿರೇಮಠ.