Tuesday 20 March 2018

ಗಝಲ್ ೨೨

ಗಝಲ್-೨೨

ನರಮನ್ಸಾ ಶಾನೆ ಬೆಳ್ಕೊಂಡ್ಬಿಟ್ಟೆ ಪಾಪಿ , ಹದ್ಮೀರಿದ್ ನಿನ್ ದುಷ್ಟ್ಬುದ್ದಿಗೆಂದೂ ಕೊನೆಯಿಲ್ಲ
ಪರಪಂಚಾನೆ ಹಾಳಾಗ್ಹೊ ದ್ರು ಯೊಚ್ನೆ ಗೀಚ್ನೆ ಯಾವ್ದುಇಲ್ಲ ,ನಿನ್ ಹುಚ್ಚಾಟಕ್ಕೆಂದೂ ಕೊನೆಯಿಲ್ಲ

ಹುಯ್ಯೋ ಮಳೆನೀರೆಲ್ಲಾ ಸೇರ್ಕೊಂಡ ತಗ್ಗಿಗ್ಹರಿಯೋದ ನಿಯಮ,ಇನ್ನೇನ್ ದಿನ್ನೆ ಹತ್ತತ್ತಾ.
ಕೆರೆಗಳ್ನುಂಗಿ ಮನೆ ಕಟ್ಕೊಂಡೆ, ನೀರ್ನುಗ್ಗಿದ್ಕೆ ಬಾಯ್ ಬಡ್ಕಳ್ಳೊ ನಾಟ್ಕಕ್ಕೆಂದೂ ಕೊನೆಯಿಲ್ಲ.

ಮರಗಳ್ನೆಲ್ಲ ಕಡ್ದಹಾಕ್ಬಿಟ್ಟೆ,ಕಾಡಿದ್ರೇನೆ ಮಳೆ ಸುರಿಯೋದು, ಇನ್ನೇನ್ ನಿನ್ ಮುಸುಡಿ ನೋಡ್ಕೊಂಡಾ
ಭೂಮಿ ಬಗ್ದು ನೀರ್ ತೆಗ್ದಾಯ್ತು ,ಕುಡಿಯೋ ನೀರ್ಗೆ ಬಡದಾಡ್ಕೊಳ್ಳೊ ದುರ್ಗತಿಗೆಂದೂ ಕೊನೆಯಿಲ್ಲ

ಕಷ್ಟಪಟ್ಟು ಸ್ವತಂತ್ರ ತಂದಿದ್ ಈ ದೇಶ ಬೇಳಸ್ಬೇಕಂತಾ, ಇನ್ನೇನ್ ಬಡವರ್ನ ಸುಲಿಯೋಕಂತಾನಾ.
ಬದುಕೊಕ್ ಲಂಚ ಸತ್ತ್ರೂ ಲಂಚ ,ದೇವ್ರ ದರ್ಷ್ನನೂ ಕಷ್ಟಾಗೋಯ್ತು ಬ್ರಷ್ಟಾಚಾರಕೆಂದೂ ಕೊನೆಯಿಲ್ಲ

ತ್ರಿನೇತ್ರಜ ಇಷ್ಟೆಲ್ಲ ಅಕ್ಷ್ರ ಗೀಚೋದು ವಸಿ ಎಚ್ರ ಮೂಡ್ಲಿ ಅಂತಾ, ಇನ್ನೆನ್ ಕೆಲ್ಸ ಇಲ್ಲಂತಾನಾ.
ಇರೊಳೊಬ್ಳೆ ಭೂಮ್ತಾಯಿ, ನಾಶಕ್ಮೊದ್ಲೆ ಎಚ್ಚೆತ್ಗೊಂಡ್ರೆ ನನ್ ಸಂತೋಷಕ್ಕೆಂದೂ ಕೊನೆಯಿಲ್ಲ.
----------------------
✍🏼 ತ್ರಿನೇತ್ರಜ್

 ಶಿವಕುಮಾರ. ಹಿರೇಮಠ.

No comments:

Post a Comment