Sunday 1 April 2018

ಸಿದ್ದಗಂಗಾ ಕಣ್ಮಣಿ




ಸಿದ್ದಗಂಗಾ  ಡಾ.ಶಿವಕುಮಾರ ಸ್ವಾಮಿಜಿಯವರ 111ನೇ ಜನ್ಮದಿನಾಚರಣೆ ನಿಮಿತ್ಯ

*ಸಿದ್ದಗಂಗಾ ಕಣ್ಮಣಿ*

ಗಂಧದ ಗುಡಿಯಲಿ
ನೆಲೆಸಿಹ ಶರಣರು
ಸಿದ್ದಗಂಗಾ ಶ್ರೀ ಗಳು
ನಡೆದಾಡುವ ದೇವರು ||ಪ||

ತ್ರಿವಿಧ ದಾಸೋಹ
ನಡೆಸುತ ಸಾಗಿಹ
ಕನ್ನಡ ನಾಡಿನ ಹಿರಿಮೆಯೆ
ಧರ್ಮ ಸಾರುವ
ಶಿಕ್ಷಣ ಬೀರುವ
ಸಿದ್ದಗಂಗೆಯ ಕಣ್ಮಣಿಯೆ
ಭಕ್ತರ ಪಾಲಿಗೆ
ಕರುಣಾಂಬುದಿಯೆ ||೧||

ಕಾಯಕದಲೆ
ಕೈಲಾಸವೆಂಬುದು
ಸಿದ್ದಗಂಗೆಯಲಿ ಕಾಣುವುದು
ಶತಾಯುಷಿಗಳ
ಪಾದ ಸ್ಪರ್ಷವೇ
ಧನ್ಯ ಭಾವವ ತುಂಬುವುದು
ಅಹಂ ಭಾವವು
ಕಳೆಯುವುದು ||೨||

ಕರ್ನಾಟಕ ರತ್ನ
ಪದ್ಮಭೂಷಣ
ಶ್ರೀ ಗಳ ಮುಕುಟ ಮಣಿಗಳು
ಭಾರತ ದೇಶದ
ಅನುಪಮ ರತುನ
ಶ್ರೀ ಶಿವಕುಮಾರ ಗುರುಗಳು
ತಮಗೆ ಸಾವಿರದ
ನಮನಗಳು||೩||

✍🏼 ತ್ರಿನೇತ್ರಜ್.

ಶ್ರೀ. ಶಿವಕುಮಾರ. ಹಿರೇಮಠ.

No comments:

Post a Comment