_*ಭಾವಗೀತೆ*_

*ಒಲವಗೀತೆ*
ಬರೆದೆನು ನಿನಗಾಗಿ
ಈ ಒಲವ ಕವಿತೆ
ಹಾಡಲೆ ಪಂಚಮದಿ
ಓ ಪ್ರಾಣ ಕಾಂತೆ||ಪ||
ಎಂಥ ಮುದದಿಂದ
ಎಷ್ಟೋ ನಯದಿಂದ
ಪದಗಳ ನಾ ಬೆಸೆದೆ
ಕಮಲದ ದಳವಿರಿಸಿ
ಮಳೆ ಬಿಲ್ಲನು ಬಳಸಿ
ನವಿರಾಗಿ ರಚಿಸಿದೆ||೧||
ಹೃದಯ ಹೂವಿಂದ
ಭಾವ ಮಕರಂದ
ಸುಗಂಧವ ಸುರಿದೆ.
ಶಶಿಯ ನಗುವಂತ
ಜಾಜಿಯ ಹೂವಂತ
ನಿನ್ನಂದವ ತುಂಬಿದೆ||೨||
ಝರಿಯು ಗಿರಿಯಿಂದ
ತಾರೆ ಅಂಬರದಿಂದ
ಬಳಕು ಬೆಳಕನಿತ್ತಿವೆ.
ಸೆಳೆಯಿತು ನಿನ್ನಂದ
ದೇವರ ದಯೆಯಿಂದ
ಹೃದಯಗಳು ಬೆಸೆದಿವೆ||೩||
*ತ್ರಿನೇತ್ರಜ್*
ಶಿವಕುಮಾರ. ಹಿರೇಮಠ
[02/03, 12:01 p.m.] Shivakumara Hiremath: skeditorblr@gmail.com

*ಒಲವಗೀತೆ*
ಬರೆದೆನು ನಿನಗಾಗಿ
ಈ ಒಲವ ಕವಿತೆ
ಹಾಡಲೆ ಪಂಚಮದಿ
ಓ ಪ್ರಾಣ ಕಾಂತೆ||ಪ||
ಎಂಥ ಮುದದಿಂದ
ಎಷ್ಟೋ ನಯದಿಂದ
ಪದಗಳ ನಾ ಬೆಸೆದೆ
ಕಮಲದ ದಳವಿರಿಸಿ
ಮಳೆ ಬಿಲ್ಲನು ಬಳಸಿ
ನವಿರಾಗಿ ರಚಿಸಿದೆ||೧||
ಹೃದಯ ಹೂವಿಂದ
ಭಾವ ಮಕರಂದ
ಸುಗಂಧವ ಸುರಿದೆ.
ಶಶಿಯ ನಗುವಂತ
ಜಾಜಿಯ ಹೂವಂತ
ನಿನ್ನಂದವ ತುಂಬಿದೆ||೨||
ಝರಿಯು ಗಿರಿಯಿಂದ
ತಾರೆ ಅಂಬರದಿಂದ
ಬಳಕು ಬೆಳಕನಿತ್ತಿವೆ.
ಸೆಳೆಯಿತು ನಿನ್ನಂದ
ದೇವರ ದಯೆಯಿಂದ
ಹೃದಯಗಳು ಬೆಸೆದಿವೆ||೩||
*ತ್ರಿನೇತ್ರಜ್*
ಶಿವಕುಮಾರ. ಹಿರೇಮಠ
[02/03, 12:01 p.m.] Shivakumara Hiremath: skeditorblr@gmail.com
No comments:
Post a Comment