Wednesday 27 June 2018

           *ಪ್ರಳಯ ಮುನ್ನ*
         
ಎನೀ ವಿಪ್ಲವ ತಲ್ಲಣಿಸಿದೆ ಭಾವ
ಅರವಿಗೆಟುಕದ ಘೋರ ಸಂಭವ||
ಧರಣಿ ಎದೆಯೊಳೆನೋ ಕಂಪನ
ಪ್ರಳಯಾಗಮನ ಮುನ್ಸೂಚನ ||ಪ||

ಕತ್ತಲ ರಾತ್ರಿಯ ಬಾಗಿದ ಕತ್ತು
ಬೆವರುತ ಬೆಚ್ಚುತ ಸಾಗುತಿದೆ
ಚಂದ್ರನಿಲ್ಲದ ಕರಿಬಾನಿನಲಿ
ಧೂಮಕೇತುವು ಕಾಣಿಸಿದೆ
ಸಂಚಲನ ಮರೆತ ಸಾಗರ
ಮೌನದ ಮನೆಯ ಸೇರಿದೆ ||೧||

ಕಡಿದು ಸುಟ್ಟ ಮರದ ಆತ್ಮಗಳು
ಕಣ್ಣರಳಿಸಿ ಕೂತಿವೆ ದಿಟ್ಟಿಸಿ
ಕೊಂದ ಬೆಂದ ಮೂಕಜೀವಿಗಳ
ಪ್ರೇತಗಳು ಕಾಯ್ದಿವೆ ಕಾತರಿಸಿ
ಬಂದಿತೆ ಅಂತ್ಯವು ಮಾನವಾ?
ತಂದುಕೊಂಡೆಯಾ ಹಂಬಲಿಸಿ.||೨||
        -------------
          *ತ್ರಿನೇತ್ರಜ*
(ಶಿವಕುಮಾರ ಹಿರೇಮಠ)

No comments:

Post a Comment